ಶ್ರೀ ದತ್ತಾತ್ರೇಯ ಜಯಂತಿ -೨೦೧೩

ಶ್ರೀ ದತ್ತಜಯಂತಿ ಒಂದು ಸಾಂಪ್ರದಾಯಿಕ ಜನ್ಮೋತ್ಸವ. ಮಾರ್ಗಶಿರ ಹುಣ್ಣಿಮೆಯಂದು ಮೃಗ ನಕ್ಷತ್ರದಲ್ಲಿ ಸಾಯಂಕಾಲ ದತ್ತನ ಜನ್ಮವಾಯಿತು, ಆದುದರಿಂದ ಆ ದಿನ ದತ್ತನ ಜನ್ಮೋತ್ಸವವನ್ನು ಎಲ್ಲ ದತ್ತಕ್ಷೇತ್ರಗಳಲ್ಲಿ ಆಚರಿಸಲಾಗುತ್ತದೆ ಈ ಬಾರಿ ಇಂದು ೧೭-ಡಿಸೆಂಬರ್-೨೦೧೩ ರಂದು ದತ್ತಾತ್ರೇಯ ಜಯಂತಿಯನ್ನು ನಾಡಿನಲ್ಲಿ ಎಲ್ಲೆಡೆ ಆಚರಿಸಲಾಗುತ್ತಿದೆ.

ದತ್ತಜಯಂತಿಯಂದು ಪೃಥ್ವಿಯ ಮೇಲೆ ದತ್ತತತ್ತ್ವವು ನಿತ್ಯದ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯನಿರತವಾಗಿರುತ್ತದೆ. ಈ ದಿನ ಮನಃಪೂರ್ವಕ ದತ್ತನ ನಾಮಜಪಾದಿ ಉಪಾಸನೆಯನ್ನು ಮಾಡಿದರೆ ದತ್ತತತ್ತ್ವದ ಆದಷ್ಟು ಹೆಚ್ಚು ಲಾಭವಾಗಲು ಸಹಾಯವಾಗುತ್ತದೆ. 

ದತ್ತನೆಂದರೆ (ನಿರ್ಗುಣದ ಅನುಭೂತಿಯನ್ನು) ಪಡೆದವನು. ‘ನಾನು ಬ್ರಹ್ಮನೇ ಆಗಿದ್ದೇನೆ, ಮುಕ್ತನೇ ಆಗಿದ್ದೇನೆ, ಆತ್ಮನೇ ಆಗಿದ್ದೇನೆ’ ಎಂಬ ನಿರ್ಗುಣದ ಅನುಭೂತಿಯನ್ನು ಯಾರಿಗೆ ಕೊಡಲಾಗಿದೆಯೋ ಅವನೇ ದತ್ತ. ಜನ್ಮದಿಂದಲೇ ದತ್ತನಿಗೆ ನಿರ್ಗುಣದ ಅನುಭೂತಿ ಇತ್ತು, ಸಾಧಕರಿಗೆ ಇಂತಹ ಅನುಭೂತಿ ಬರಲು ಎಷ್ಟೋ ಜನ್ಮಗಳವರೆಗೆ ಸಾಧನೆಯನ್ನು ಮಾಡಬೇಕಾಗುತ್ತದೆ. ಇದರಿಂದ ದತ್ತನ ಮಹತ್ವವು ಗಮನಕ್ಕೆ ಬರುತ್ತದೆ.

ಇತರ ಕೆಲವು ಹೆಸರುಗಳು

ಅವಧೂತ: 
೧. ‘ಅವಧೂತ ಚಿಂತನ ಶ್ರೀ ಗುರುದೇವ ದತ್ತ|’ ಎಂಬ ಜಯಘೋಷವನ್ನು ದತ್ತಭಕ್ತರು ಮಾಡುತ್ತಾರೆ. ಇದರ ಅರ್ಥವು ಹೀಗಿದೆ - ಅವಧೂತನೆಂದರೆ ಭಕ್ತ. ಭಕ್ತರ ಚಿಂತನೆಯನ್ನು ಮಾಡುವವನು, ಅಂದರೆ ಭಕ್ತರ ಹಿತಚಿಂತಕ, ಶ್ರೀ ಗುರುದೇವ ದತ್ತ.

೨. ಎಲ್ಲ ಸಂಕಲ್ಪ-ವಿಕಲ್ಪರಹಿತದ ವಿಭೂತಿಯನ್ನು ಅವನು ಸಂಪೂರ್ಣ ಶರೀರಕ್ಕೆ ಹಚ್ಚಿಕೊಂಡಿದ್ದನು. ಆದುದರಿಂದಲೇ ಅವನಿಗೆ ‘ಅವಧೂತ’ ಎಂದು ಕರೆಯಲಾಗುತ್ತಿತ್ತು; ಅನ್ಯಥಾ ಅವನು ಬ್ರಾಹ್ಮಣನೇ ಆಗಿದ್ದನು. ಸುತ್ತಲಿನ ಪ್ರಪಂಚವನ್ನು ಅವನು ಆತ್ಮಜ್ಞಾನದಿಂದ ತೊಳೆದಿದ್ದನು; ಆದುದರಿಂದಲೂ ಅವನಿಗೆ ‘ಅವಧೂತ’ ಎನ್ನಬೇಕು. ಅನ್ಯಥಾ ಅವನು ಓರ್ವ ವಿಖ್ಯಾತ ಬ್ರಾಹ್ಮಣನಾಗಿದ್ದನು. ಯಾವನು ‘ಅಹಂ’ ವನ್ನು ತೊಳೆಯುತ್ತಾನೆಯೋ ಅವನೇ ಅವಧೂತ, ಅವನೇ ಯೋಗಿ ಮತ್ತು ಅವನೇ ಪುನೀತನಾಗಿದ್ದಾನೆ. ಯಾವನು ಅಹಂಕಾರಪೀಡಿತನಾಗಿರು ತ್ತಾನೆಯೋ ಅವನೇ ಜನ್ಮಕರ್ಮಗಳಲ್ಲಿ ಪಾಪಿಯಾಗಿರುತ್ತಾನೆ ಎಂದು ತಿಳಿಯಬೇಕು. - ಏಕನಾಥೀ ಭಾಗವತ ಅಧ್ಯಾಯ ೭, ದ್ವಿಪದಿ ೨೭೦-೨೭೨

ದಿಗಂಬರ
‘ದಿಕ್ ಏವ ಅಂಬರಃ|’ ದಿಕ್ ಅಂದರೆ ದಿಕ್ಕುಗಳೇ ಯಾವನ ಅಂಬರವಾಗಿವೆಯೋ, ಅಂದರೆ ವಸ್ತ್ರವಾಗಿವೆಯೋ, ಅವನೇ ದಿಗಂಬರ; ಅಂದರೆ ಅವನು ಇಷ್ಟು ದೊಡ್ಡವನಾಗಿದ್ದಾನೆ, ಸರ್ವವ್ಯಾಪಿಯಾಗಿದ್ದಾನೆ.

ದತ್ತಾತ್ರೇಯ ಶಬ್ದವು ದತ್ತ + ಆತ್ರೇಯ ಹೀಗೆ ರೂಪುಗೊಂಡಿದೆ. ದತ್ತನ ಅರ್ಥವನ್ನು ವಿಷಯ ಪ್ರಾರಂಭದಲ್ಲಿ ನೀಡಲಾಗಿದೆ. ಆತ್ರೇಯ ಎಂದರೆ ಅತ್ರಿಋಷಿಗಳ ಮಗ.

ಜನ್ಮದ ಇತಿಹಾಸ

ದತ್ತನ ಜನ್ಮವು ಪ್ರಸ್ತುತ ಮನ್ವಂತರದ ಆರಂಭದಲ್ಲಿ ಪ್ರಥಮ ಪರ್ಯಾಯದಲ್ಲಿನ ತ್ರೇತಾಯುಗದಲ್ಲಿ ಆಗಿದೆ, ಎಂಬ ವರ್ಣನೆಯು ಪುರಾಣಗಳಲ್ಲಿ ಸಿಗುತ್ತದೆ. ಪುರಾಣಗಳಿಗನುಸಾರವಾಗಿ ಅತ್ರಿಋಷಿಗಳ ಪತ್ನಿ ಅನಸೂಯಾಳು ಮಹಾಪತಿವ್ರತೆಯಾಗಿದ್ದಳು. ಅವಳ ಪಾತಿವ್ರತ್ಯದ ಪರೀಕ್ಷೆ ತೆಗೆದುಕೊಳ್ಳಲು ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು ನಿರ್ಧರಿಸಿದರು. ಒಮ್ಮೆ ಅತ್ರಿಋಷಿಗಳು ಅನುಷ್ಠಾನಕ್ಕಾಗಿ ಹೊರಗೆ ಹೋದಾಗ ತ್ರಿಮೂರ್ತಿಗಳು (ಬ್ರಹ್ಮ, ವಿಷ್ಣು ಹಾಗೂ ಮಹೇಶ್ವರರು) ಅತಿಥಿಗಳ ವೇಷದಲ್ಲಿ ಬಂದರು ಮತ್ತು ಅನಸೂಯಾಳ ಬಳಿ ಭೋಜನವನ್ನು ಬೇಡಿದರು. ಅದಕ್ಕೆ ಅನಸೂಯಾಳು, ‘ಋಷಿಗಳು ಅನುಷ್ಠಾನಕ್ಕಾಗಿ ಹೊರಗೆ ಹೋಗಿದ್ದಾರೆ ಅವರು ಬರುವ ತನಕ ತಡೆಯಿರಿ’ ಎಂದಳು. ಆಗ ತ್ರಿಮೂರ್ತಿಗಳು ಅನಸೂಯಾಳಿಗೆ, ‘ಋಷಿಗಳಿಗೆ ಹಿಂದಿರುಗಲು ತಡವಾಗಬಹುದು; ನಮಗೆ ತುಂಬಾ ಹಸಿವಾಗಿದೆ; ತಕ್ಷಣ ಆಹಾರವನ್ನು ನೀಡು, ಇಲ್ಲವಾದರೆ ನಾವು ಬೇರೆ ಕಡೆ ಹೋಗುತ್ತೇವೆ’. ‘ಆಶ್ರಮಕ್ಕೆ ಬಂದ ಅತಿಥಿಗಳಿಗೆ ನೀವು ಇಚ್ಛಾಭೋಜನವನ್ನು ನೀಡುತ್ತೀರಿ,’ ಎಂದು ನಾವು ಕೇಳಿದ್ದೇವೆ; ಆದುದರಿಂದ ನಾವು ಇಚ್ಛಾಭೋಜನವನ್ನು ಮಾಡಲು ಬಂದಿದ್ದೇವೆ’ ಎಂದು ಹೇಳಿದರು. ನಂತರ ಅನಸೂಯಾಳು ಅವರನ್ನು ಸ್ವಾಗತಿಸಿದಳು ಮತ್ತು ಭೋಜನಕ್ಕೆ ಕುಳಿತುಕೊಳ್ಳಲು ವಿನಂತಿಸಿದಳು. ಅದರಂತೆಯೇ ಅವರು ಭೋಜನಕ್ಕೆ ಕುಳಿತುಕೊಂಡರು. ಅವಳು ಊಟಕ್ಕೆ ಬಡಿಸಲು ಬಂದಾಗ ಅವರು, ‘ನೀನು ವಿವಸ್ತ್ರಳಾಗಿ ನಮಗೆ ಬಡಿಸಬೇಕು ಎಂಬುದು ನಮ್ಮ ಇಚ್ಛೆಯಾಗಿದೆ’ ಎಂದರು. ‘ಅತಿಥಿಗಳನ್ನು ಹಿಂದಿರುಗಿಸಿ ಕಳುಹಿಸುವುದು ಅಯೋಗ್ಯವಾಗುತ್ತದೆ. ನನ್ನ ಮನಸ್ಸು ನಿರ್ಮಲವಾಗಿದೆ. ನನ್ನ ಪತಿಯ ತಪಸ್ಸಿನ ಫಲವು ನನ್ನನ್ನು ಕಾಪಾಡುವುದು,’ ಎಂದು ವಿಚಾರ ಮಾಡಿ ಅವಳು ಅತಿಥಿಗಳಿಗೆ ‘ಸರಿ, ನೀವು ಭೋಜನಕ್ಕೆ ಕುಳಿತುಕೊಳ್ಳಿರಿ’ ಎಂದಳು. ನಂತರ ಅಡುಗೆಮನೆಗೆ ಹೋಗಿ ಪತಿಯ ಸ್ಮರಣೆಯನ್ನು ಮಾಡಿದಳು, ಮನಸ್ಸಿನಲ್ಲಿ ‘ಅತಿಥಿಗಳು ನನ್ನ ಮಕ್ಕಳೇ ಆಗಿದ್ದಾರೆ’ ಎಂಬ ಭಾವವನ್ನಿಟ್ಟುಕೊಂಡಳು. ನಂತರ ನೋಡಿದರೆ ಅಲ್ಲಿ ಅತಿಥಿಗಳ ಜಾಗದಲ್ಲಿ ಅಳುತ್ತಿರುವ ಮೂರು ಮಕ್ಕಳಿದ್ದರು! ಅವರನ್ನು ಮಡಿಲಲ್ಲಿ ತೆಗೆದುಕೊಂಡು ಅವಳು ಸ್ತನಪಾನವನ್ನು ಮಾಡಿಸಿದಳು. ಮಕ್ಕಳು ಅಳುವುದನ್ನು ನಿಲ್ಲಿಸಿದರು.

ಅಷ್ಟರಲ್ಲಿಯೇ ಅತ್ರಿಋಷಿಗಳು ಬಂದರು. ಅವಳು ಅವರಿಗೆ ಎಲ್ಲ ವೃತ್ತಾಂತವನ್ನು ತಿಳಿಸಿದಳು. ಅವಳು, ‘ಸ್ವಾಮಿನ್ ದೇವೇನ ದತ್ತಮ್|’ ಎಂದು ಹೇಳಿದಳು. ಇದರ ಅರ್ಥ - ‘ಹೇ ಸ್ವಾಮಿ, ದೇವರು ನೀಡಿದ (ಮಕ್ಕಳು).’ ಇದರಿಂದ ಅತ್ರಿಯವರು ಆ ಮಕ್ಕಳ ನಾಮಕರಣವನ್ನು ‘ದತ್ತ’ ಎಂದು ಮಾಡಿದರು. ನಂತರ ಅತ್ರಿಋಷಿಗಳು ಅಂತರ್‌ಜ್ಞಾನದಿಂದ ಆ ಮಕ್ಕಳ ನಿಜ ಸ್ವರೂಪವನ್ನು ತಿಳಿದುಕೊಂಡು ಅವರಿಗೆ ನಮಸ್ಕಾರ ಮಾಡಿದರು. ಮಕ್ಕಳು ತೊಟ್ಟಿಲಲ್ಲಿ ಉಳಿದವು ಹಾಗೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರು ಅವರೆದುರು ಪ್ರಕಟರಾದರು ಮತ್ತು ಪ್ರಸನ್ನರಾಗಿ ‘ವರ ಬೇಡಿರಿ’, ಎಂದರು. ಅತ್ರಿ ಮತ್ತು ಅನಸೂಯರು ‘ಬಾಲಕರು ನಮ್ಮ ಮನೆಯಲ್ಲಿಯೇ ಇರಲಿ’, ಎಂಬ ವರವನ್ನು ಕೇಳಿದರು. ಆ ವರವನ್ನು ನೀಡಿ ದೇವರು ತಮ್ಮತಮ್ಮ ಲೋಕಗಳಿಗೆ ತೆರಳಿದರು. ಮುಂದೆ ಬ್ರಹ್ಮದೇವನಿಂದ ಚಂದ್ರ, ಶ್ರೀವಿಷ್ಣುವಿನಿಂದ ದತ್ತ ಮತ್ತು ಶಂಕರನಿಂದ ದೂರ್ವಾಸರಾದರು. ಮೂವರಲ್ಲಿ ಚಂದ್ರ ಮತ್ತು ದೂರ್ವಾಸರು ತಪಸ್ಸಿಗೆ ಹೋಗಲು ಅನುಮತಿಯನ್ನು ಪಡೆದು ಕ್ರಮವಾಗಿ ಚಂದ್ರಲೋಕ ಮತ್ತು ತೀರ್ಥಕ್ಷೇತ್ರಗಳಿಗೆ ಹೋದರು. ಮೂರನೆಯ ದತ್ತನು ವಿಷ್ಣುವಿನ ಕಾರ್ಯಕ್ಕಾಗಿ ಭೂಮಿಯ ಮೇಲೆ ಉಳಿದನು.

ಇಂದಿನ ದತ್ತ ಜಯಂತಿ ನಿಮಿತ್ತ ಈ ಬರಹ ನಿಮಗಾಗಿ ಓಂಕಾರ ಸಮಿತಿ ಸಂಗ್ರಹಿಸಿ ಕೊಡಲಾಗಿದೆ.

ನಾರದ ಮುನಿ ವಿರಚಿತ ಶ್ರೀ ದತ್ತಾತ್ರೇಯ ಸ್ತೋತ್ರ :

ಜಟಾಧರಂ ಪಾಂಡುರಂಗಂ ಶೂಲಹಸ್ತಂ ಕೃಪಾನಿಧಿಮ್ |
ಸರ್ವರೋಗಹರಂ ದೇವಂ ದತ್ತಾತ್ರೇಯಮಹಂ ಭಜೇ ||೧||

ಅಸ್ಯ ಶ್ರೀದತ್ತಾತ್ರೇಯಸ್ತೋತ್ರಮಂತ್ರಸ್ಯ ಭಗವಾನ್ ನಾರದಋಷಿಃ |
ಅನುಷ್ಟುಪ್ ಛಂದಃ | ಶ್ರೀದತ್ತಪರಮಾತ್ಮಾ ದೇವತಾ |
ಶ್ರೀದತ್ತಪ್ರೀತ್ಯರ್ಥೇ ಜಪೇ ವಿನಿಯೋಗಃ ||

ಜಗದುತ್ಪತ್ತಿಕರ್ತ್ರೇ ಚ ಸ್ಥಿತಿಸಂಹಾರ ಹೇತವೇ |
ಭವಪಾಶವಿಮುಕ್ತಾಯ ದತ್ತಾತ್ರೇಯ ನಮೋಸ್ತುತೇ ||೧||

ಜರಾಜನ್ಮವಿನಾಶಾಯ ದೇಹಶುದ್ಧಿಕರಾಯ ಚ |
ದಿಗಂಬರದಯಾಮೂರ್ತೇ ದತ್ತಾತ್ರೇಯ ನಮೋಸ್ತುತೇ ||೨||

ಕರ್ಪೂರಕಾಂತಿದೇಹಾಯ ಬ್ರಹ್ಮಮೂರ್ತಿಧರಾಯ ಚ |
ವೇದಶಾಸ್ತ್ರಪರಿಜ್ಞಾಯ ದತ್ತಾತ್ರೇಯ ನಮೋಸ್ತುತೇ ||೩||

ಹ್ರಸ್ವದೀರ್ಘಕೃಶಸ್ಥೂಲ-ನಾಮಗೋತ್ರ-ವಿವರ್ಜಿತ |
ಪಂಚಭೂತೈಕದೀಪ್ತಾಯ ದತ್ತಾತ್ರೇಯ ನಮೋಸ್ತುತೇ ||೪||

ಯಜ್ಞಭೋಕ್ತೇ ಚ ಯಜ್ಞಾಯ ಯಜ್ಞರೂಪಧರಾಯ ಚ |
ಯಜ್ಞಪ್ರಿಯಾಯ ಸಿದ್ಧಾಯ ದತ್ತಾತ್ರೇಯ ನಮೋಸ್ತುತೇ ||೫||

ಆದೌ ಬ್ರಹ್ಮಾ ಮಧ್ಯ ವಿಷ್ಣುರಂತೇ ದೇವಃ ಸದಾಶಿವಃ |
ಮೂರ್ತಿತ್ರಯಸ್ವರೂಪಾಯ ದತ್ತಾತ್ರೇಯ ನಮೋಸ್ತುತೇ ||೬||

ಭೋಗಾಲಯಾಯ ಭೋಗಾಯ ಯೋಗಯೋಗ್ಯಾಯ ಧಾರಿಣೇ |
ಜಿತೇಂದ್ರ್ರಿಯಜಿತಜ್ಞಾಯ ದತ್ತಾತ್ರೇಯ ನಮೋಸ್ತುತೇ ||೭||

ದಿಗಂಬರಾಯ ದಿವ್ಯಾಯ ದಿವ್ಯರೂಪಧ್ರಾಯ ಚ |
ಸದೋದಿತಪರಬ್ರಹ್ಮ ದತ್ತಾತ್ರೇಯ ನಮೋಸ್ತುತೇ ||೮||

ಜಂಬುದ್ವೀಪಮಹಾಕ್ಷೇತ್ರಮಾತಾಪುರನಿವಾಸಿನೇ |
ಜಯಮಾನಸತಾಂ ದೇವ ದತ್ತಾತ್ರೇಯ ನಮೋಸ್ತುತೇ ||೯||

ಭಿಕ್ಷಾಟನಂ ಗೃಹೇ ಗ್ರಾಮೇ ಪಾತ್ರಂ ಹೇಮಮಯಂ ಕರೇ |
ನಾನಾಸ್ವಾದಮಯೀ ಭಿಕ್ಷಾ ದತ್ತಾತ್ರೇಯ ನಮೋಸ್ತುತೇ ||೧೦||

ಬ್ರಹ್ಮಜ್ಞಾನಮಯೀ ಮುದ್ರಾ ವಸ್ತ್ರೇ ಚಾಕಾಶಭೂತಲೇ |
ಪ್ರಜ್ಞಾನಘನಬೋಧಾಯ ದತ್ತಾತ್ರೇಯ ನಮೋಸ್ತುತೇ ||೧೧||

ಅವಧೂತಸದಾನಂದಪರಬ್ರಹ್ಮಸ್ವರೂಪಿಣೇ |
ವಿದೇಹದೇಹರೂಪಾಯ ದತ್ತಾತ್ರೇಯ ನಮೋಸ್ತುತೇ ||೧೨||

ಸತ್ಯಂರೂಪಸದಾಚಾರಸತ್ಯಧರ್ಮಪರಾಯಣ |
ಸತ್ಯಾಶ್ರಯಪರೋಕ್ಷಾಯ ದತ್ತಾತ್ರೇಯ ನಮೋಸ್ತುತೇ ||೧೩||

ಶೂಲಹಸ್ತಗದಾಪಾಣೇ ವನಮಾಲಾಸುಕಂಧರ |
ಯಜ್ಞಸೂತ್ರಧರಬ್ರಹ್ಮನ್ ದತ್ತಾತ್ರೇಯ ನಮೋಸ್ತುತೇ ||೧೪||

ಕ್ಷರಾಕ್ಷರಸ್ವರೂಪಾಯ ಪರಾತ್ಪರತರಾಯ ಚ |
ದತ್ತಮುಕ್ತಿಪರಸ್ತೋತ್ರ ದತ್ತಾತ್ರೇಯ ನಮೋಸ್ತುತೇ ||೧೫||

ದತ್ತ ವಿದ್ಯಾಢ್ಯಲಕ್ಷ್ಮೀಶ ದತ್ತ ಸ್ವಾತ್ಮಸ್ವರೂಪಿಣೇ |
ಗುಣನಿರ್ಗುಣರೂಪಾಯ ದತ್ತಾತ್ರೇಯ ನಮೋಸ್ತುತೇ ||೧೬||

ಶತ್ರುನಾಶಕರಂ ಸ್ತೋತ್ರಂ ಜ್ಞಾನವಿಜ್ಞಾನದಾಯಕಮ್ |
ಸರ್ವಪಾಪಂ ಶಮಂ ಯಾತಿ ದತ್ತಾತ್ರೇಯ ನಮೋಸ್ತುತೇ ||೧೭||

ಇದಂ ಸ್ತೋತ್ರಂ ಮಹಾದ್ದಿವ್ಯಂ ದತ್ತಪ್ರತ್ಯಕ್ಷಕಾರಕಮ್ |
ದತ್ತಾತ್ರೇಯಪ್ರಸಾದಾಚ್ಚ ನಾರದೇನ ಪ್ರಕೀರ್ತಿತಮ್ ||೧೮|| ||

ಇತಿ ಶ್ರೀನಾರದಪುರಾಣೇ ನಾರದವಿರಚಿತಂ ದತ್ತಾತ್ರೇಯಸ್ತೋತ್ರಂ ಸಂಪೂರ್ಣಮ್ || 

ಗೀತಾ ಜಯಂತಿ - ೨೦೧೩

ಮಾರ್ಗಶಿರಮಾಸದ ಶುಕ್ಲ ದಶಮಿ ಮತ್ತು ಏಕಾದಶಿ ಸೇರಿದ ದಿನ (ಅಂದರೆ ಈ ಬಾರಿ ೧೩-ಡಿಸೆಂಬರ್ ೨೦೧೪), ಶ್ರೀ ಕೃಷ್ಣನು ಅರ್ಜುನನಿಗೆ ಭಗವದ್ಗೀತೆಯನ್ನು ಬೋಧಿಸಿದನೆಂಬುದು ನಂಬುಗೆ. ಅಂದು, ಪಾಂಡವರಿಗೂ ಕೌರವರಿಗೂ ಕುರುಕ್ಷೇತ್ರದಲ್ಲಿ ನಡೆದ ಮಹಾಭಾರತ ಯುದ್ಧದ ಆರಂಭದ ದಿನ. 

ಭಗವದ್ಗೀತೆಯು ನಮ್ಮ ಪಂಚಾಂಗಗಳ ಪ್ರಕಾರ ಕಲಿಯುಗಾದಿ ಲೆಕ್ಕದಲ್ಲಿ ೫೧೦೦ ವರ್ಷಗಳ ಹಿಂದೆ ನಡೆದ ಉಪದೇಶ.ಇತಿಹಾಸ ಸಂಶೋಧಕರು ಇದನ್ನು ೩೫೦೦ ವರ್ಷಗಳಷ್ಟು ಹಿಂದೆ ನೆಡೆದದ್ದೆಂದು ಸಾಧಿಸುತ್ತಾರೆ. ಭಗವದ್ಗೀತೆಯ ಬೋಧನೆಯ ಸನ್ನಿವೇಶವು ಬಹಳ ವಿಚಿತ್ರವಾಗಿದೆ. ಒಂದು ಕಡೆ ಪಾಂಡವರ ಏಳು ಅಕ್ಷೋಹಿಣಿ ಸೇನೆ; ಎದುರಿಗೆ ಕೌರವರ ಹನ್ನೊಂದು ಅಕ್ಷೋಹಿಣಿ ಸೇನೆ. ಇವೆರಡರ ಮದ್ಯೆ ಅರ್ಜುನನ ರಥ; ಶ್ರೀಕೃಷ್ಣ ಸಾರಥಿ. ಈ ಘಟ್ಟದಲ್ಲಿಅರ್ಜುನನಿಗೆ ಬಂಧುಗಳನ್ನು ಕೊಲ್ಲಬೇಕಾದ ದುಗುಡ. ಈ ಬಂಧು ಬಾಂಧವರನ್ನು ಕೊಂದು ಪಡೆವ ರಾಜ್ಯವೇ ಬೇಡ; ಭಿಕ್ಷಬೇಡಿ ಜೀವಿಸುವುದೇ ಲೇಸು ಎಂಬ ಭಾವನೆ. ಸಂದಿಗ್ಧ ಸ್ಥಿತಿಯಲ್ಲಿದ್ದ ಅರ್ಜನ ಶ್ರೀ ಕೃಷ್ಣನನ್ನು ಕುರಿತು, ನಾನು ನಿನ್ನ ಶಿಷ್ಯ, ಯುದ್ಧ ಮಾಡುವುದೋ ಬಿಡುವುದೋ, ಧರ್ಮಸಂಕಟದಲ್ಲಿದ್ದೇನೆ, ಯಾವುದು ಶ್ರೇಯಸ್ಸು? ನಿಶ್ಚಿತವಾಗಿ ಹೇಳು. ಎಂದ. ಶ್ರೀ ಕೃಷ್ಣನನ್ನು ಈ ಗೀತೋಪದೇಶದ ಸಂದರ್ಭದಲ್ಲಿ ಮಾತ್ರ ಭಗವಂತನು ಹೇಳಿದನು ಎಂದಿದೆ. ಅದರಿಂದಲೇ ಶ್ರೀಕೃಷ್ಣನು ಅರ್ಜುನನಿಗೆ ಉಪದೇಶ ಮಾಡಿದ ಗೀತಾ ರೂಪದಲ್ಲಿರುವ ಸಂಭಾಷಣೆಗಳು ಭಗವದ್ಗೀತೆ ಎಂದು ಹೆಸರಾಗಿದೆ.

ಭಗವದ್ಗೀತೆಯು ಹದಿನೆಂಟು ಅಧ್ಯಾಯಗಳಿಂದ ಕೂಡಿದ್ದರೂ, ಶ್ರೀಕೃಷ್ಣನ ಉಪದೇಶ, ಎರಡನೆಯ ಅಧ್ಯಾಯದ ಹನ್ನೊಂದನೇ ಶ್ಲೋಕದಿಂದ ಆರಂಭವಾಗಿದೆ. ಮುಂದೆ ಅದೇ ಅಧ್ಯಾಯದ ಐವತ್ಮೂರನೇ ಶ್ಲೋಕದವರೆಗೆ, ಎಂದರೆ ನಲವತ್ಮೂರು ಶ್ಲೋಕಗಳಲ್ಲಿ ಅರ್ಜುನನಿಗೆ ಹೇಳಬೇಕಾದುದನ್ನೆಲ್ಲಾ ಹೇಳಿಯಾಯಿತು. ಆದರೆ ಸಂದೇಹ ನಿವಾರಣೆಗಾಗಿ, ಅವನ ಪ್ರಶ್ನೆಗಳಿಗೆ ಉತ್ತರ ರೂಪವಾಗಿ ಉಳಿದ ಆರುನೂರು ಶ್ಲೋಕಗಳು ಬಂದಿವೆ. ಅರ್ಜುನನ ವಿಷಾದದ ಸಂದರ್ಭದ ಶ್ಲೋಕಗಳೂ ಸೇರಿ ಭಗವದ್ಗೀತೆಯ ಹದಿನೆಂಟು ಅಧ್ಯಾಯಗಳಲ್ಲಿ ಒಟ್ಟು ಏಳು ನೂರು ಶ್ಲೋಕಗಳಾಗತ್ತವೆ.

ಗೀತೆ ಚಿಕ್ಕದಾದರೂ ಹಿಂದೂ ಧರ್ಮದ ಮಹಾ ಗ್ರಂಥವೆಂದು ಹೆಸರು ಪಡೆದಿದೆ. ಅದನ್ನು ಉಪನಿಷತ್ತುಗಳ ಸಾರವೆಂದು ಹೇಳುತ್ತಾರೆ. ಅದರಲ್ಲಿ ಅನೇಕ ಬಗೆಯ ಯೋಗಗಳನ್ನು ಹೇಳಿದ್ದರೂ, ಅದರಲ್ಲಿ ಹೇಳಿದ ಕರ್ಮಯೋಗ, ಜ್ಞಾನಯೋಗಗಳೇ ಬಹಳ ಪ್ರಸಿದ್ಧವಾಗಿವೆ. ಅದನ್ನು ಅರ್ಥ ಮಾಡಿಕೊಳ್ಳುವುದು ಸಮುದ್ರದಿಂದ ಬೊಗಸೆ ನೀರನ್ನು ತಂದಂತೆ. ಆದನ್ನು ಓದಿದವರು, ಅನುಷ್ಠಾನ ಮಾಡುವವರು ಗೀತೆಯನ್ನು ಪೂರ್ಣ ಅರಿತಿದ್ದೇವೆಂದು ಹೇಳುವಂತಿಲ್ಲ. ಇದನ್ನು ಕೇಳಿದ ಮಾತ್ರದಿಂದ ಅರಿಯಲಾರರು, ಎಂಬುದು ಅದರಲ್ಲಿರುವ ಎಚ್ಚರಿಕೆ. ಅದರಲ್ಲಿರುವ ಎಲ್ಲಾ ಉಪದೇಶಗಳೂ ಎಲ್ಲರಿಗೂ ಅನ್ವಯಿಸಲಾರದೆಂದು ನನ್ನ ಭಾವನೆ. ಅವರವರ ಗುಣ ಸ್ವಭಾವ, ನಂಬುಗೆಗಳಿಗೆ ತಕ್ಕಂತೆ ಬೇಕಾದ ಯೋಗ ವನ್ಮ್ನ ಆರಿಸಿಕೊಳ್ಳಬಹ್ಮದು. ಸದ್ಧರ್ವ್ಮದ ದುಡಿಮೆಯುಳ್ಳ ಸಜ್ಜನಿಕೆಯ ಪರೋಪಕಾರಿ ಗೃಹಸ್ಥ ಜೀವನ, ಕರ್ಮಯೋಗದ ಆದರ್ಶ ಜೇವನವಾಗಬಹುದೆಂದು ನನ್ನಭಾವನೆ. ಈ ಮಹಾನ್ ಗ್ರಂಥವನ್ನು ಪ್ರತಿಯೊಬ್ಬರೂ ಒಮ್ಮೆಯಾದರೂ ಓದಬೇಕು. ಕಾಲ ಧರ್ಮಕ್ಕನುಸರಿಸಿ ತಮಗೆಬೇಕಾದದ್ದನ್ನು ಆಯ್ದುಕೊಳ್ಳಬಹುದು. ಅದರಲ್ಲಿರುವ ಸರ್ವಕಾಲಿಕ ಸತ್ಯಗಳು ಮಾನವರೆಲ್ಲರಿಗೂ ಅನ್ವಯವಾಗುವಂತಿವೆ.

ಶ್ರೀ ಆಂಜನೇಯ ಪೂಜೆ - ೨೦೧೩

|| ಮನೋಜವಂ ಮಾರುತತುಲ್ಯವೇಗಂ, ಜಿತೇಂದ್ರಿಯಂ ಬುದ್ಧಿಮತಾಂವರಿಷ್ಟಂ ||
|| ವಾತಾತ್ಮಜಂ ವಾನರಯೋಧಮುಖ್ಯಂ, ಶ್ರೀರಾಮಧೂತಂ ಶಿರಸಾ ನಮಾಮಿ ||

ನಾವೆಲ್ಲರೂ ನಮ್ಮ ಚೈತನ್ಯಮಯವಾದ ದೇಹ, ಮನಸ್ಸು, ವಾಕ್ ಇತ್ಯಾದಿ ಶಕ್ತಿಗಳನ್ನು ದೇವರಿಂದ ವರಪ್ರಸಾದವಾಗಿ ಪಡೆದುಕೊಂಡು ಬಂದಿದ್ದೇವೆ. ಆದರೆ ಇವುಗಳನ್ನು ಬೇಡದಿರುವ ವಿಚಾರಗಳಲ್ಲಿ ತೊಡಗಿಸುತ್ತ ನಮ್ಮ ಶಕ್ತಿಗಳನ್ನು ಕ್ಷೀಣಗೊಳಿಸುತ್ತಿದ್ದೇವೆ. ತೀವ್ರವಾಗಿ ಇದರ ಬಗ್ಗೆ ವಿಚಾರ ಮಾಡಿದಾಗ ನಮಗೆ ಅರಿವಾಗುತ್ತದೆ, ನನ್ನಲ್ಲಿ ಆ ದೈವೀಕ ಅಂಶ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದು. ಆಗಿದ್ದು ಹೇಗೆ ಅಂದರೆ ದಿನ ನಿತ್ಯವೂ ನಾನಾ ಕಾರಣಗಳಿಂದ ನಾವು ಮನಸ್ಸಿಗೆ ಧ್ಯಾನದ ಆಹಾರ ಕೊಡುವುದಿಲ್ಲ. 

ಮನಸ್ಸು ಅಂದರೆ ಹೇಗೆ ಇಟ್ಟುಕೊಳ್ಳಬೇಕು, ಅದನ್ನು ಹತೋಟಿಗೆ ಹೇಗೆ ತರಬೇಕೆಂದು ನಮಗೆ ತಿಳಿಸಿಕೊಟ್ಟವನು ಆಂಜನೇಯ. ಶ್ರೀರಾಮನಿಗೆ ಆಂಜನೇಯ ತನ್ನ ದೇಹ ಮಾತ್ರ ಅಲ್ಲ, ನಿರಂತರವಾಗಿ ಕೊಟ್ಟದ್ದು ತನ್ನ ಮನಸ್ಸನ್ನು. ಅವನ ಎದೆಯಲ್ಲಿ, ಮನಸ್ಸಿನಲ್ಲಿ, ಹೃದಯ ಕಮಲದಲ್ಲಿ ನಿರಂತರವಾಗಿ ಇದ್ದದ್ದು ರಾಮ, ಲಕ್ಷ್ಮಣ, ಸೀತೆಯರು ಮಾತ್ರ. ಶ್ರೀರಾಮ ಅವನ ಭಕ್ತಿಗೆ ಮೆಚ್ಚಿ ವರವನ್ನು ಕರುಣಿಸಿದಾಗ, ಆಂಜನೇಯ ಮುಕ್ತಿಯನ್ನು ಬಯಸಲಿಲ್ಲ- ಸದಾ ನನ್ನ ಮನಸ್ಸಿನಲ್ಲಿ ನೀನೇ ನೆಲೆಸಬೇಕು, ಏಳೇಳು ಲೋಕಗಳಲ್ಲಿ ಸಂಚರಿಸುತ್ತ ನಿನ್ನ ಗುಣಗಾನವನ್ನು ನಾನು ಮಾಡಬೇಕು' ಎಂದನು. ಆದ್ದರಿಂದ ಶ್ರೀರಾಮನು ಆಂಜನೇಯನಿಗೆ ಚಿರಂಜೀವತ್ವವನ್ನು ಕರುಣಿಸಿದನು.

ಕಲಿಯುಗದಲ್ಲಿ ಜನರು ಭಕ್ತಿ ಎಂದರೇನು, ಮನಸ್ಸನ್ನು ಹೇಗೆ ತಿಳಿಯಾಗಿ ಇಟ್ಟುಕೊಳ್ಳಬಹುದು ಎನ್ನುವ ವಿಚಾರ ಆಂಜನೇಯನಿಂದ ತಿಳಿದುಕೊಳ್ಳಲಿ ಎನ್ನುವುದೇ ಈ ಪೂಜೆಯ ಉದ್ದೇಶ. ತನ್ನ ಮನಸ್ಸನ್ನೇ ಅಲ್ಲದೆ ಆಂಜನೇಯ ತನ್ನ ದೇಹದ ಕಣಕಣವನ್ನು, ನರನಾಡಿಗಳೆಲ್ಲವನ್ನೂ ಶ್ರೀರಾಮನಿಗಾಗಿ ಅರ್ಪಿಸಿಬಿಟ್ಟ. ಆಗ ಅವನ ದೇಹಕ್ಕೆ ಪುಷ್ಟಿ, ಮನಸ್ಸಿಗೆ ಧೈರ್ಯ ಬಂತು. ತಾನೇ ಒಂದು ಶಕ್ತಿಯಾಗಿ ನಿಂತ.

ಬರುವ ೨೭ ನೇ ಡಿಸೆಂಬರ್ ೨೦೧೩ ರಂದು ಓಂಕಾರ ಸಮಿತಿಯು ಶ್ರೀ ಆಂಜನೇಯ ಸ್ವಾಮಿಯ ಪೂಜೆಯನ್ನು ಹಮ್ಮಿಕೊಂಡಿರುತ್ತದೆ. ಎಲ್ಲರೂ ತಮ್ಮ ಪರಿವಾರ, ಬಂಧು-ಬಾಂಧವರೊಂದಿಗೆ ಆಗಮಿಸಿ ಶ್ರೀ ಆಂಜನೇಯ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿ.